Wednesday, July 22, 2026
spot_imgspot_img
spot_imgspot_img

ವಿಜಯಪುರ: ಕಾರು ಪಲ್ಟಿ; ಶ್ರೀಶೈಲಕ್ಕೆ ಹೋಗುತ್ತಿದ್ದ ಇಬ್ಬರು ದುರ್ಮರಣ

- Advertisement -
- Advertisement -

ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ.

ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ(70) ಹಾಗೂ ಕಾಮಪ್ಪ ಅವರಾದಿ(65) ಎಂದು ಗುರುತಿಸಲಾಗಿದೆ.

ಸ್ವಿಫ್ಟ್‌ ಡಿಜೈರ್ ಕಾರಿನಲ್ಲಿ ನಾಲ್ವರು ಕಾಗವಾಡದಿಂದ ಶ್ರೀಶೈಲಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಈ ಸಂಬಂಧ ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!