




ಬೆಂಗಳೂರು: ಬೈಕ್ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್ನ ಆರೋಪಿಗಳನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ನಿಖಿಲ್, ಪ್ರಶಾಂತ್ ಅಲಿಯಾಸ್ ಪಿಂಕಿ, ಅರುಣ್ ಕುಮಾರ್, ಹರೀಶ್, ರಕ್ಷಿತ್ ಬಂಧಿತ ಆರೋಪಿಗಳು. ಬಂಧಿತರಿಂದ 10 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶ್ರೀ ಕೈಲಾಸ್ ಎಂಬಾತನನ್ನ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ಗ್ಯಾಂಗ್ ದರೋಡೆ ಮಾಡಿ ಎಸ್ಕೇಪ್ ಆಗಿತ್ತು. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೈಲಾಸ್ ಅವರು ಉಡಾನ್ ಕಂಪನಿಗೆ ಸೇರಿದ ಹಣವನ್ನ ಕಲೆಕ್ಷನ್ ಮಾಡುತ್ತಿದ್ದರು. ಕಳೆದ ಫೆ.1 ರಂದು ಹಣ ಕಲೆಕ್ಷನ್ ಮಾಡಿದ್ದರು. ಬೈಕ್ನಲ್ಲಿ ಬರುವಾಗ ಎರಡು ಬೈಕ್ಗಳಲ್ಲಿ ಗ್ಯಾಂಗ್ ಹಿಂಬಾಲಿಸಿತ್ತು. ಲಾಂಗ್ನಿಂದ ಹಲ್ಲೆ ನಡೆಸಿ ಹಣ, ಬೈಕ್ ರಾಬರಿ ಮಾಡಿ ಎಸ್ಕೇಪ್ ಆಗಿತ್ತು. ರಸ್ತೆಯಲ್ಲಿ ಬೈಕ್ ಬಿಟ್ಟು ಹಣ ಎಗರಿಸಿ ಪರಾರಿಯಾಗಿತ್ತು. 31,38,625 ರೂ. ಹಣವನ್ನ ರಾಬರಿ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದರು.
ಮೂರು ತಂಡಗಳ ರಚನೆ ಮಾಡಿ ಅರೋಪಿಗಳಿಗೆ ತಲಾಶ್ ನಡೆಸಿದ್ದರು. ಪರಿಚಿತರೇ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಕೈಲಾಸ್ಗೆ ಹಣ ನೀಡಿದ್ದ ಉಡಾನ್ ಕಂಪನಿಯ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಲಾಯಿತು. ವಿಚಾರಣೆ ವೇಳೆ ರಾಬರಿ ಪ್ಲ್ಯಾನ್ ಮಾಸ್ಟರ್ ಮೈಂಡ್ ಬಂಧಿಸಲಾಯಿತು.
ಉಡಾನ್ ಕಂಪನಿಯ ಸಿಬ್ಬಂದಿ ರಕ್ಷಿತ್ ಎಂಬಾತನನ್ನು ಪೊಲೀಸರು ಬಂಧಿಸಿ, ಕೈಲಾಸ್ ನಿತ್ಯ ಹಣ ಕಲೆಕ್ಷನ್ ಮಾಡುವುದಾಗಿ ತಿಳಿದಿದ್ದ ರಕ್ಷಿತ್, ತನ್ನ ಸ್ನೇಹಿತರ ಜೊತೆಗೂಡಿ ರಾಬರಿ ಮಾಡಿ ಹಣ ಮಾಡಲು ಮುಂದಾಗಿದ್ದ. ಅದರಂತೆಯೇ ಪ್ಲ್ಯಾನ್ ಮಾಡಿ ಗ್ಯಾಂಗ್ ದರೋಡೆ ಮಾಡಿತ್ತು.
ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಡಿವೈಎಸ್ಪಿ ಮೋಹನ್, ಇನ್ಸ್ಪೆಕ್ಟರ್ಗಳಾದ ಕೃಷ್ಣಕುಮಾರ್, ಮಂಜುನಾಥ್ ತಂಡದಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.








