Wednesday, July 22, 2026
spot_imgspot_img
spot_imgspot_img

ತೊಕ್ಕೊಟ್ಟು: ಆರಿಫ್ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳ ಗುರುತು ಪತ್ತೆ: ಪೊಲೀಸ್‌ ಆಯುಕ್ತ

- Advertisement -
- Advertisement -

ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವುದು ತನಿಖಾ ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ. ಹಾಗಾಗಿ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀ‌ರ್ ಕುಮಾ‌ರ್ ರೆಡ್ಡಿ ತಿಳಿಸಿದ್ದಾರೆ.

ಈವರೆಗೆ ನಡೆದ ತನಿಖೆಯಲ್ಲಿ ಈ ಕೊಲೆ ಕೃತ್ಯದಲ್ಲಿ ಇನ್ನಷ್ಟು ಆರೋಪಿಗಳು ಭಾಗಿ ಆಗಿರುವುದನ್ನು ಗುರುತಿಸಲಾಗಿದ್ದು, ಆರೋಪಿಗಳಿಗೆ ಕೃತ್ಯ ಎಸಗಲು ಹಾಗೂ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಶಂಕಿತ ಕೆಲವು ವ್ಯಕ್ತಿಗಳನ್ನುವಿಚಾರಣೆಗೆ ಒಳಪಡಿಸಲಾಗುತ್ತಿದೆ. ಕೃತ್ಯದಲ್ಲಿ ಅವರ ಪಾತ್ರ ದೃಢಪಟ್ಟರೆ, ಅವರನ್ನು ಸಹ ಬಂಧಿಸಲಾಗುವುದು ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವ ಯಾರಾದರೂ ಬಿಎನ್‌ಸ್ (ಅಪರಾಧಿಗೆ ಆಶ್ರಯ ನೀಡುವ) ಸೆಕ್ಷನ್ 249(ಎ) ಅಡಿಯಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಪೊಲೀಸ್ ಕಮಿಷನ‌ರ್ ತಿಳಿಸಿದ್ದಾರೆ.

- Advertisement -

Related news

error: Content is protected !!