



ಗಾಜಿಯಾಬಾದ್: ಗಾಜಿಯಾಬಾದ್ನ ಇಂದಿರಾಪುರಂ ಪ್ರದೇಶದ ಗೌರ್ ಗ್ರೀನ್ ಅವೆನ್ಯೂ ಹೌಸಿಂಗ್ ಸೊಸೈಟಿಯ ಒಂಭತ್ತನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬೆಳಿಗ್ಗೆ ಸುಮಾರು 8.50ರ ಸುಮಾರಿಗೆ ಆರಂಭವಾದ ಬೆಂಕಿ, ಕ್ಷಣಾರ್ಧದಲ್ಲೇ ಇತರ ಮಹಡಿಗಳಿಗೂ ವ್ಯಾಪಿಸಿದೆ.
ದಟ್ಟವಾದ ಕಪ್ಪು ಹೊಗೆ ಕಟ್ಟಡದ ಮೇಲೆ ಏರಿದ್ದು, ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಿಂದಲೂ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಬಿರುಗಾಳಿಯ ಗಾಳಿಯಿಂದಾಗಿ ಬೆಂಕಿ ವೇಗವಾಗಿ ಹರಡಿದ ಪರಿಣಾಮ, ಏಳರಿಂದ ಎಂಟು ಮಹಡಿಗಳು ಪ್ರಭಾವಿತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ತಕ್ಷಣ 15 ಅಗ್ನಿಶಾಮಕ ವಾಹನಗಳನ್ನು ರವಾನಿಸಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಒಳಗೆ ಯಾರೂ ಸಿಲುಕಿಕೊಂಡಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ತಕ್ಷಣ ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚಿಸಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ವರದಿ ಮೂಲಕ ತಿಳಿದುಬಂದಿದೆ.







