- Advertisement -
- Advertisement -
ನವದೆಹಲಿ: ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾನೆ. ಮೂವರನ್ನು ರಕ್ಷಿಸಲಾಗಿದೆ.
ನವದೆಹಲಿಯ ಮಾಯಾಪುರಿ ಪ್ರದೇಶದಲ್ಲಿ ಇಂದು (ಡಿ.26) ಬೆಳಗ್ಗೆ ನಡೆದಿದೆ. ಬೆಳಗಿನ ಜಾವ 3.54ರ ವೇಳೆಗೆ ಬೆಂಕಿ ಅವಘಡ ಸಂಭವಿಸಿದೆ. ವಿಷಯ ತಿಳಿದಾಕ್ಷಣ ಅಗ್ನಿಶಾಮಕ ದಳದ 6 ವಾಹನಗಳು ಕಾರ್ಯಾಚರಣೆ ನಡೆಸಿದೆ. ಜುಗಲ್ ಕಿಶೋರ್ ಎಂಬಾತ ಮೃತಪಟ್ಟಿದ್ದಾನೆ ಎಂದು ದೆಹಲಿ ಅಗ್ನಿಶಾಮಕ ದಳದ ಮುಖ್ಯಸ್ಥ ಅತುಲ್ ಗರ್ಗ್ ತಿಳಿಸಿದ್ದಾರೆ.
ತಯಾರಿಕಾ ಘಟಕದ ಮೂರನೇ ಮಹಡಿಯಲ್ಲಿರುವ ಯಂತ್ರಗಳು ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾದ ನಂತರ ಈ ಅಪಘಾತ ಸಂಭವಿಸಿದೆ ಎಂದು ಡಿಎಫ್ಎಸ್ ಮುಖ್ಯಸ್ಥರು ತಿಳಿಸಿದ್ದಾರೆ. ಡಿಎಫ್ ಎಸ್ ತಂಡವು ಘಟಕದ ಬಾಗಿಲು ಮತ್ತು ಗೋಡೆಗಳನ್ನು ಒಡೆದು ಮೂವರನ್ನು ರಕ್ಷಿಸಿದೆ ಎಂದು ಅವರು ಹೇಳಿದರು. ರಕ್ಷಿಸಿದವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -