- Advertisement -
- Advertisement -
ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ತಡರಾತ್ರಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಘಟನೆ ಸಂಬಂಧ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಆಗ್ರಹಿಸಿದ್ದಾರೆ.
ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಿಡಿಗೇಡಿ ಪತ್ತೆಗೆ ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸಿದ್ದಾರೆ.
- Advertisement -