- Advertisement -
- Advertisement -
ಮಂಗಳೂರು: ನಗರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಕಛೇರಿಗೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಕಾರ್ಯಕರ್ತರಿಂದ ಯತ್ನ ನಡೆಯಿತು.PFI ಮುಖಂಡರ ಮೇಲೆ ED ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ CFI ಕಾರ್ಯಕರ್ತರು ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.ಈ ವೇಳೆ ಪೊಲೀಸರು ಹಾಗು CFI ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ಉಂಟಾಯಿತು.
ನಂತರ CFI ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆಗೆ ಮುಂದಾದರು.ಹಾಗಾಗಿ,ಜಿಲ್ಲಾಧಿಕಾರಿ ಕಛೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಯಿತು.ಬಳಿಕ ಪ್ರತಿಭಟನಕಾರರನ್ನು ಪೊಲೀಸ್ ಬಂಧಿಸಲಾಯಿತು.
- Advertisement -