Friday, July 24, 2026
spot_imgspot_img
spot_imgspot_img

ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಲ – ವಿಡಿಯೋ ಮಾಡಿಟ್ಟು ಯುವಕ ನೇಣಿಗೆ ಶರಣು

- Advertisement -
- Advertisement -

ನೆಲಮಂಗಲ: ಐಪಿಎಲ್ ಬೆಟ್ಟಿಂಗ್‌ಗಾಗಿ ಮೈತುಂಬ ಸಾಲ ಮಾಡಿಕೊಂಡು ತೀರಿಸೋಕೆ ಆಗದೇ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.

ಮೂಲತಃ ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಶಿವಕುಮಾರ್ (28) ಮೃತ ಯುವಕ. ಕಳೆದ ಆರು ವರ್ಷದಿಂದ ನೆಲಮಂಗಲಕ್ಕೆ ಬಂದು ಕಾರ್ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ.

ಎರಡು ದಿನಗಳ ಹಿಂದೆ ತನ್ನ ರೂಮ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದಕ್ಕೂ ಮುನ್ನ ಸೆಲ್ಫಿ ವಿಡಿಯೋ ಮಾಡಿಟ್ಟು, ಬಳಿಕ ನೇಣಿಗೆ ಶರಣಾಗಿದ್ದಾನೆ. ನನ್ನ ಸಾವಿಗೆ ನಾನೇ ಕಾರಣ, ಬೇರೆ ಯಾರೂ ಅಲ್ಲ. ಮೈತುಂಬ ಸಾಲ ಮಾಡಿಕೊಂಡು ನನಗೆ ಬದುಕಲು ಇಷ್ಟ ಇಲ್ಲ. ನನ್ನ ಸ್ನೇಹಿತ ನನಗೆ ತುಂಬಾ ಹೆಲ್ಪ್ ಮಾಡಿದ್ದಾನೆ. ನಾನೇ ನೇಣಿಗೆ ಶರಣಾಗುತ್ತಿದ್ದೇನೆ ಎಂದು ಹೇಳಿದ್ದಾನೆ.ಸದ್ಯ ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!