Wednesday, July 22, 2026
spot_imgspot_img
spot_imgspot_img

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಬೆಂಕಿ – ತಪ್ಪಿದ ಭಾರೀ ಅನಾಹುತ

- Advertisement -
- Advertisement -

ಜೈಪುರ್‌: ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ರಾಜಸ್ಥಾನದ ಕೋಟಾದ ವಿಕ್ರಮ್‌ಗಢ ಅಲೋಟ್ ರೈಲು ನಿಲ್ದಾಣದ ಬಳಿ ಬಿ-1 ಕೋಚ್‌ನಲ್ಲಿ ಬೆಳಿಗ್ಗೆ 5:15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಈ ಕೋಚ್‌ನಲ್ಲಿ 68 ಮಂದಿ ಪ್ರಯಾಣಿಸುತ್ತಿದ್ದರು. ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ತಕ್ಷಣ ಬೆಂಕಿ ಹೊತ್ತಿಕೊಂಡಿದ್ದ ಬೋಗಿಯನ್ನು ಬೇರ್ಪಡಿಸಲಾಯಿತು ಮತ್ತು ಸುರಕ್ಷತೆಗಾಗಿ ಓವರ್‌ ಹೆಡ್‌ ವಿದ್ಯುತ್ ಸರಬರಾಜನ್ನು (ಒಹೆಚ್‌ಇ) ತಕ್ಷಣವೇ ಆಫ್ ಮಾಡಲಾಯಿತು. ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಕೋಟಾಗೆ ತೆರಳಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

12431 ರಾಜಧಾನಿ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಕೇರಳದ ತಿರುವನಂತಪುರಂನಿಂದ ಹೊರಟು ಇಂದು ಮಧ್ಯಾಹ್ನ 12:30ಕ್ಕೆ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣ ತಲುಪಬೇಕಿತ್ತು. ಬೆಂಕಿ ಕಾಣಿಸಿಕೊಂಡಾಗ ರೈಲು ಸುಮಾರು 2,600 ಕಿಲೋಮೀಟರ್ ಕ್ರಮಿಸಿ, ದೆಹಲಿಗೆ ಸುಮಾರು 450 ಕಿಲೋಮೀಟರ್ ದೂರದಲ್ಲಿತ್ತು.

ಬೆಂಕಿಯನ್ನು ತಕ್ಷಣವೇ ನಂದಿಸಲಾಗಿದ್ದು, ಅಗ್ನಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!