- Advertisement -
- Advertisement -




ಶಿವಮೊಗ್ಗ: ಕರ್ತವ್ಯನಿರತ ಪೊಲೀಸ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಈರಣ್ಣ ಗುಡಾದಾರ್ (26) ಮೃತ ದುರ್ದೈವಿ. ಮೂಲತಃ ಬೆಳಗಾವಿಯ ಗೋಕಾಕ್ ತಾಲೂಕಿನವರಾದ ಈರಣ್ಣ ಗುಡಾದಾರ್ ಕಳೆದ 7 ವರ್ಷದಿಂದ ಕೆಎಸ್ಆರ್ಪಿ 8ನೇ ಪಡೆಯಲ್ಲಿ ಕಾನ್ಸ್ಟೇಬಲ್ ಆಗಿದ್ದರು.
ಈರಣ್ಣ ಗುಡಾದಾರ್ 18 ದಿನಗಳ ಹಿಂದೆಯಷ್ಟೇ ಅದ್ದೂರಿ ವಿವಾಹವಾಗಿದ್ದರು. ಕುಸಿದು ಬಿದ್ದ ಹಿನ್ನೆಲೆ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಈರಣ್ಣ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








