Thursday, July 23, 2026
spot_imgspot_img
spot_imgspot_img

ಮಳೆಯಿಂದ ನಿರ್ಮಾಣ ಹಂತದ ಗೋಡೆ ಕುಸಿತ – ಇಬ್ಬರು ಕಾರ್ಮಿಕರು ದುರ್ಮರಣ

- Advertisement -
- Advertisement -

ಬೆಂಗಳೂರು: ಮಳೆಯಿಂದ ನೆನೆದಿದ್ದ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ದ್ಯಾಮಪ್ಪ ಹಾಗೂ ಬಾಬುಲಾಲ್ ಮೃತ ಕಾರ್ಮಿಕರು. ಕಳೆದ ಎರಡು ದಿನದ ಮಳೆಯಿಂದ ನಿರ್ಮಾಣ ಹಂತದ ಗೋಡೆ ನೆನೆದಿತ್ತು. ಈ ಗೋಡೆಯನ್ನು ಮತ್ತೆ ನಿರ್ಮಾಣಕ್ಕೆ ಕಾರ್ಮಿಕರು ಮುಂದಾದಾಗ ಕುಸಿದಿದೆ. ಇದರಿಂದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಪಟೇಲ್ ಎಂಬವವರಿಗೆ ಸೇರಿದ ಸೈಟ್‌ನಲ್ಲಿ ಈ ಅವಘಡ ನಡೆದಿದೆ. ಇಬ್ಬರ ಮೃತದೇಹಗಳನ್ನು ನೆಲಮಂಗಲ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!