- Advertisement -
- Advertisement -







ಬೆಂಗಳೂರು : ರಾಜ್ಯ ರಾಜಕಾರಣದ ಪ್ರಮುಖ ಸ್ಥಿತ್ಯಂತರದಲ್ಲಿ, ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಅಲಂಕರಿಸಿದ್ದಾರೆ.
ಕರ್ನಾಟಕದ 23ನೇ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್ ಅವರ ಹೊಸ ಸಂಪುಟಕ್ಕೆ ಕರಾವಳಿಯ ಪ್ರಭಾವಿ ನಾಯಕ ಹಾಗೂ ಮಾಜಿ ಸ್ಪೀಕರ್ ಯು.ಟಿ.ಖಾದರ್ ಅವರು ಸಚಿವರಾಗಿ ಸೇರ್ಪಡೆಗೊಳ್ಳುವ ಮೂಲಕ ಬಲ ತುಂಬಿದ್ದಾರೆ.
ಉಳ್ಳಾಲ ಕ್ಷೇತ್ರದ ಶಾಸಕರಾಗಿರುವ ಯು.ಟಿ.ಖಾದರ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
- Advertisement -








