Monday, July 6, 2026
spot_imgspot_img
spot_imgspot_img

9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅಂತೂ ಅರೆಸ್ಟ್!-ಆಂಧ್ರಪ್ರದೇಶದಲ್ಲಿ ಬಂಧನ

- Advertisement -
- Advertisement -

ಧರ್ಮಸ್ಥಳ: ಸುಮಾರು 09 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆಯ 2016ರ (ಅ.ಕ್ರ.169/2016) ಕಳವು ಹಾಗೂ ಸಾಕ್ಷ್ಯ ನಾಶ (ಐಪಿಸಿ ಕಲಂ 379, 201) ಪ್ರಕರಣದ ಆರೋಪಿ ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಕಳೆದ 09 ವರ್ಷಗಳಿಂದ ತಲೆಮರೆಸಿಕೊಂಡು ವಿಚಾರಣೆಗೆ ಹಾಜರಾಗುತ್ತಿರಲಿಲ್ಲ.

ಧರ್ಮಸ್ಥಳ ಠಾಣೆಯ ಸಿಬ್ಬಂದಿಗಳಾದ ವೃಷಭ ಹಾಗೂ ಚರಣ್ ರಾಜ್ ಅವರು ಜೂನ್ 30ರಂದು ಚಿತ್ತೂರಿನಲ್ಲಿ ಆರೋಪಿಯನ್ನು ಬಂಧಿಸಿ, ಜುಲೈ 1ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

- Advertisement -

Related news

error: Content is protected !!