Friday, July 3, 2026
spot_imgspot_img
spot_imgspot_img

ಅಯೋಧ್ಯೆ ರಾಮಮಂದಿರ ದೇಣಿಗೆ ಅವ್ಯವಹಾರ: ‘ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ’ -ಆರ್‌ಎಸ್‌ಎಸ್‌ ಸರ್ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

- Advertisement -
- Advertisement -

ನವದೆಹಲಿ, ಜು. 3: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ದೇಣಿಗೆ ಪೆಟ್ಟಿಗೆಗಳಲ್ಲಿನ ಹಣ ದುರ್ಬಳಕೆ ಆರೋಪ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರತಿಕ್ರಿಯಿಸಿದೆ.ಆರ್‌ಎಸ್‌ಎಸ್‌ ಸರ್ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಈ ಘಟನೆ ಇಡೀ ಹಿಂದೂ ಸಮಾಜದ ಭಾವನೆಗಳಿಗೆ ತೀವ್ರ ಧಕ್ಕೆಯುಂಟು ಮಾಡಿದ್ದು, ರಾಮಭಕ್ತರ ನಂಬಿಕೆಗೆ ನೋವುಂಟುಮಾಡಿದೆ ಎಂದು ತಿಳಿಸಿದ್ದಾರೆ.

ಶ್ರೀರಾಮ ಜನ್ಮಭೂಮಿ ನಿರ್ಮಾಣವು ಕೋಟ್ಯಂತರ ರಾಮಭಕ್ತರ ಸಮರ್ಪಣೆ, ತ್ಯಾಗ ಮತ್ತು ದೀರ್ಘ ಹೋರಾಟದ ಫಲವಾಗಿದ್ದು, ಶ್ರೀರಾಮ ಲಲ್ಲಾ ದೇವಸ್ಥಾನವು ಹಿಂದೂ ಸಮಾಜದ ಭಕ್ತಿ ಮತ್ತು ನಂಬಿಕೆಯ ಸಂಕೇತವಾಗಿದೆ. ಇಂತಹ ಪವಿತ್ರ ಕ್ಷೇತ್ರದಲ್ಲಿ ದೇಣಿಗೆ ಪೆಟ್ಟಿಗೆಗಳ ಹಣದ ಕಳ್ಳತನದ ಆರೋಪ ಅತ್ಯಂತ ದುರದೃಷ್ಟಕರ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.

ಈ ಪ್ರಕರಣದ ತನಿಖೆಗಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮನವಿಯ ಮೇರೆಗೆ ಉತ್ತರ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದು, ತನಿಖೆಯ ಆಧಾರದ ಮೇಲೆ ಈಗಾಗಲೇ ಕಾನೂನು ಕ್ರಮ ಆರಂಭಿಸಲಾಗಿದೆ ಎಂದು ತಿಳಿಸಿದರು.”ತನಿಖೆಯಲ್ಲಿ ತಪ್ಪಿತಸ್ಥರೆಂದು ಕಂಡುಬರುವ ಯಾರೇ ಆಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಭಕ್ತರ ನಂಬಿಕೆಯನ್ನು ಕಾಪಾಡುವುದು ಅತ್ಯಂತ ಮುಖ್ಯ,” ಎಂದು ದತ್ತಾತ್ರೇಯ ಹೊಸಬಾಳೆ ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!