- Advertisement -
- Advertisement -





ಬಂಟ್ವಾಳ: ಬೋಳಂತೂರು ಗ್ರಾಮದ ಕೊಕ್ಕುಪುಣಿ ನಿವಾಸಿ ರಹೀಮ್ ಅವರಿಗೆ ಸೇರಿದ ಅಂಗಡಿಯು ಸೋಮವಾರ ಬೆಳಗಿನ ಜಾವ ಸುರಿದ ಭಾರೀ ಮಳೆಯ ಪರಿಣಾಮ ಸಂಪೂರ್ಣ ಹಾನಿಗೊಳಗಾಗಿದೆ.
ಜೋರಾದ ಗಾಳಿಯ ರಭಸಕ್ಕೆ ಮರ ಬಿದ್ದು ಅಂಗಡಿಯೊಳಗಿದ್ದ ವಸ್ತುಗಳು ಹಾನಿಗೀಡಾಗಿದ್ದು, ಅಪಾರ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಮೆಸ್ಕಾಂ ಸಿಬ್ಬಂದಿಗಳು ಬೆಳಗ್ಗೆಯೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮರವನ್ನು ತೆರವುಗೊಳಿಸಿದರು ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. .
- Advertisement -








