Tuesday, July 14, 2026
spot_imgspot_img
spot_imgspot_img

ಹೆದ್ದಾರಿಯ ಮಧ್ಯೆ ಟೇಬಲ್‌ ಇಟ್ಟು, ಕತ್ತಿ ಹಿಡಿದು ವಿಚಿತ್ರ ವರ್ತನೆ; ಸಾರ್ವಜನಿಕರಲ್ಲಿ ಆತಂಕ, ಯುವಕ ವಶಕ್ಕೆ

- Advertisement -
- Advertisement -

ಕೋಟ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಯುವಕನೊಬ್ಬ ವಿಚಿತ್ರವಾಗಿ ವರ್ತಿಸಿ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಹೆದ್ದಾರಿಯ ಮಧ್ಯೆ ಟೇಬಲ್‌ ಇಟ್ಟು, ಟಿವಿ ಹಾಗೂ ಧ್ವನಿವರ್ಧಕ ಅಳವಡಿಸಿ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಕೆಲಕಾಲ ಸಂಚಾರದಲ್ಲಿ ಗೊಂದಲ ಉಂಟಾಯಿತು. ಕೋಟತಟ್ಟು ಸಮೀಪದ ಬೆಲ್ಲದ ಗಣಪತಿ ದೇವಸ್ಥಾನ ಸಮೀಪದ ನಿವಾಸಿ ರಂಜಿತ್‌ ಸೋಮಯಾಜಿ (25) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹೆದ್ದಾರಿಯಲ್ಲೇ ಯುವಕ ವಿಚಿತ್ರವಾಗಿ ವರ್ತಿಸುವುದನ್ನು ಕಂಡ ವಾಹನ ಸವಾರರು ಮತ್ತು ಸ್ಥಳೀಯರು ಆತಂಕಗೊಂಡಿದ್ದು ಕೋಟ ಪೊಲೀಸರಿಗೆ ಮಾಹಿತಿ ನೀಡಿದ್ದು ಅವರು ಸ್ಥಳಕ್ಕೆ ಧಾವಿಸಿದರು.

ಈ ವೇಳೆ ಪೊಲೀಸರ ಮೇಲೆಯೇ ರಂಜಿತ್ ಕತ್ತಿ ಬೀಸಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.ಪ್ರಾಥಮಿಕ ವಿಚಾರಣೆಯಲ್ಲಿ ಆತ ಮಾನಸಿಕ ಅಸ್ವಸ್ಥನಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದರೂ ಕೂಡ ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

- Advertisement -

Related news

error: Content is protected !!