Saturday, August 8, 2026
spot_imgspot_img
spot_imgspot_img

ಕರ್ನಾಟಕದಲ್ಲಿ 3 ತಿಂಗಳಲ್ಲಿ 1 ಸಾವಿರ ಅಕ್ರಮ ವಲಸಿಗರು ಪತ್ತೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬೆಂಗಳೂರು: ಕಳೆದ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಸುಮಾರು 1 ಸಾವಿರ ಮಂದಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾದೇಶೀಯರು ಪತ್ತೆಯಾಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ವಲಸಿಗರ ಪತ್ತೆಗೆ ವಿಶೇಷ ತಂಡ ರಚಿಸಿ ನಿರಂತರವಾಗಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಎಫ್‌ಆರ್‌ಒ ಹಾಗೂ ಬಿಎಸ್‌ಎಫ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕಟ್ಟುನಿಟ್ಟಿನ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.ಬಾಂಗ್ಲಾದೇಶ ಅಥವಾ ಆಫ್ರಿಕಾ ಸೇರಿದಂತೆ ಯಾವುದೇ ದೇಶದವರಾಗಿದ್ದರೂ ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪತ್ತೆಯಾಗಿರುವವರಲ್ಲಿ ಬಹುತೇಕರು ಉತ್ತರ ಭಾರತದಿಂದ ಕರ್ನಾಟಕಕ್ಕೆ ಬಂದಿದ್ದಾರೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.

ಕರ್ನಾಟಕಕ್ಕೆ ಯಾವುದೇ ಅಂತಾರಾಷ್ಟ್ರೀಯ ಗಡಿ ಇಲ್ಲ. ಬಾಂಗ್ಲಾದೇಶ, ನೇಪಾಳ ಸೇರಿದಂತೆ ಯಾವುದೇ ರಾಷ್ಟ್ರದ ಗಡಿಯನ್ನು ರಾಜ್ಯ ಹಂಚಿಕೊಂಡಿಲ್ಲ. ಹಾಗಿದ್ದರೂ ಅಕ್ರಮ ವಲಸಿಗರು ರಾಜ್ಯಕ್ಕೆ ಪ್ರವೇಶಿಸುತ್ತಿದ್ದರೆ ಅವರು ಎಲ್ಲಿಂದ ಬರುತ್ತಿದ್ದಾರೆ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ಅವರು ಪ್ರಶ್ನಿಸಿದರು.ಅಂತಾರಾಷ್ಟ್ರೀಯ ಗಡಿ ಭದ್ರತೆ ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಗಡಿ ಭದ್ರತೆಯಲ್ಲಿ ಲೋಪವಾಗುತ್ತಿರುವುದರಿಂದ ಅಕ್ರಮ ವಲಸಿಗರು ರಾಜ್ಯದೊಳಗೆ ಬರುತ್ತಿದ್ದಾರೆ ಎಂಬುದು ತಮ್ಮ ಅಭಿಪ್ರಾಯ ಎಂದು ಸಚಿವರು ಹೇಳಿದರು.

ಇತ್ತೀಚೆಗೆ ಸ್ಲಂಗಳಿಗೆ ತೆರಳಿ ಜನರ ದೇಶ, ರಾಜ್ಯದ ಬಗ್ಗೆ ವಿಚಾರಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಪ್ರವೃತ್ತಿ ಹೆಚ್ಚಾಗಿದೆ. ಈ ಬಗ್ಗೆ ಮಾಹಿತಿ ಇದ್ದರೆ ಸರ್ಕಾರದ ಸಿಬ್ಬಂದಿಗೆ ನೀಡಬೇಕು. ಸಾಮಾಜಿಕ ಜಾಲತಾಣದಲ್ಲಿ ಹೀರೋ ಆಗುವ ಪ್ರಯತ್ನದಲ್ಲಿ ಅಂತಾರಾಷ್ಟ್ರೀಯ ಮಾಫಿಯಾವನ್ನು ಬಲಪಡಿಸುವ ಕೆಲಸ ಮಾಡಬಾರದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

- Advertisement -

Related news

error: Content is protected !!