Sunday, August 23, 2026
spot_imgspot_img
spot_imgspot_img

ಪುತ್ತೂರಿನಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿದೆ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಅವರೇ…? – ಪ್ರಶ್ನೆ ಮಾಡಿದ ಬಿಜೆಪಿ ದಕ್ಷಿಣ ಕನ್ನಡ

- Advertisement -
- Advertisement -

ಅಂದು ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದ ಪೈಶಾಚಿಕ ಕೃತ್ಯದ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಶಾಸಕರು ಬೇಜವಾಬ್ದಾರಿತನ ತೋರದೆ, ಕಠಿಣ ಹಾಗೂ ತ್ವರಿತ ಕ್ರಮ ಕೈಗೊಂಡಿದ್ದರೆ, ಇಂದು ಇಂತಹ ಘಟನೆಗಳು ಮರುಕಳಿಸುವ ಧೈರ್ಯ ಯಾರಿಗೂ ಬರುತ್ತಿರಲಿಲ್ಲ.

ಆದರೆ ಇಂದು ಮತ್ತೆ ಪುತ್ತೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲೊಡ್ಡುವಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಮತ್ತು ಪೊಲೀಸ್ ಜೀಪ್‌ನಲ್ಲಿದ್ದ ಹಿಂದೂ ಮಹಿಳೆಯರಿಗೆ ಹಲ್ಲೆ ಮಾಡಿರುವುದು ವಿಷಾದನೀಯ.

ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರಿಂದ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಫೇಸ್‌ಬುಕ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ. ದರ್ಬೆಯಲ್ಲಿರುವ ಜೆರಾಕ್ಸ್ ಅಂಗಡಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಈ ಪೋಸ್ಟ್ ಮಾಡಿದ್ದಾರೆ.

- Advertisement -

Related news

error: Content is protected !!