Tuesday, September 1, 2026
spot_imgspot_img
spot_imgspot_img

ನೇಪಾಳ ಭೀಕರ ಪ್ರವಾಹ: ಮೃತರ ಸಂಖ್ಯೆ 939ಕ್ಕೆ ಏರಿಕೆ, ಸುಮಾರು 4,000 ಜನ ಕಣ್ಮರೆ

- Advertisement -
- Advertisement -

ಕಠ್ಮಂಡು: ನೇಪಾಳದ ಚೀನಾ ಗಡಿಯ ಬಳಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಇದುವರೆಗೂ ಕನಿಷ್ಠ 939 ಜನರು ಸಾವನ್ನಪ್ಪಿದ್ದು, ಕಾಣೆಯಾದವರ ಸಂಖ್ಯೆ 3,925 ಕ್ಕೆ ಇಳಿಕೆಯಾಗಿದೆ.
ದುರಂತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಟಿಬೆಟ್‌ನಲ್ಲಿ ಇಲ್ಲಿಯವರೆಗೆ 16 ಜನ ಮೃತಪಟ್ಟಿದ್ದು, 546 ಜನರು ಕಣ್ಮರೆಯಾಗಿದ್ದಾರೆ.

ನೇಪಾಳದ ಪ್ರವಾಹದಲ್ಲಿ ಕಾಣೆಯಾದವರ ಪೈಕಿ 592 ವಿದೇಶಿಯರೂ ಸೇರಿದ್ದಾರೆ. ಪ್ರವಾಹದಿಂದ ಹೆಚ್ಚು ಹಾನಿಗೊಳಗಾದ ಜಲವಿದ್ಯುತ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 639 ಕಾರ್ಮಿಕರಿಗಾಗಿ ಹುಡುಕಾಟ ಮುಂದುವರಿದಿದೆ. ನೇಪಾಳದ ವಿಪತ್ತು ಸಂಸ್ಥೆ 3,333 ನೇಪಾಳಿ ನಾಗರಿಕರು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿಸಿದೆ. ಹಿಮಾಲಯದ ಮಾರಕ ಪ್ರವಾಹವು ಸಾಮಾನ್ಯ ವಿಪತ್ತಲ್ಲ ಎಂದು ಹೇಳಿರುವ ನೇಪಾಳ ಪ್ರಧಾನಿ ಬಾಲೇಂದ್ರ ಶಾ ಹೆಚ್ಚಿನ ಅಂತರರಾಷ್ಟ್ರೀಯ ಕ್ರಮಕ್ಕೆ ಕರೆ ನೀಡಿದ್ದಾರೆ.

ಜಾಗತಿಕ ತಾಪಮಾನ ಹೆಚ್ಚಾದಂತೆ ಹಿಮಾಲಯ ಪ್ರದೇಶಗಳಲ್ಲಿಯೂ ತಾಪಮಾನದಲ್ಲಿ ಬದಲಾವಣೆಯಾಗುತ್ತಿದೆ. ಆದ್ದರಿಂದ ಈ ರೀತಿಯ ಅನಿರೀಕ್ಷಿತ ಪ್ರವಾಹ ಮತ್ತು ನೈಸರ್ಗಿಕ ವಿಪತ್ತು ಸಂಭವಿಸುತ್ತಿದೆ. ಹಿಮನದಿಗಳು ಕರಗಿ ಪ್ರವಾಹದ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುತ್ತಿದೆ ಎಂದು ವಿಜ್ಞಾನಿಗಳು ಎಚ್ಚರಿಸಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!