
ವಿಟ್ಲ: ವಿಠಲ್ ಜೇಸೀಸ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ನಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಸೆಪ್ಟೆಂಬರ್ 2ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಳಿಕೆ ಸತ್ಯಸಾಯಿ ಶಾಲೆಯ ಮುಖ್ಯೋಪಾಧ್ಯಾಯ ರಘು ಟಿ.ವೈ. ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರಯತ್ನ, ಏಕಾಗ್ರತೆ ಹಾಗೂ ಸಮರ್ಪಕ ತಯಾರಿ ಅತ್ಯಂತ ಮುಖ್ಯ ಎಂದು ಅವರು ತಿಳಿಸಿದರು. ಪ್ರಸಕ್ತ ಶಿಕ್ಷಣ ವ್ಯವಸ್ಥೆಯಲ್ಲಿನ ನೈಜ ಸಂಗತಿಗಳು ಹಾಗೂ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ವಿವರವಾದ ಮಾಹಿತಿ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಪ್ರಾಂಶುಪಾಲ ಜಯರಾಮ್ ರೈ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಎಸ್ಎಸ್ಎಲ್ಸಿ ತರಗತಿ ಶಿಕ್ಷಕ ಗುರುವಪ್ಪ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಪರೀಕ್ಷಾ ಸಿದ್ಧತೆ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ ಶೆಟ್ಟಿ, ಉಪಾಧ್ಯಕ್ಷ ರಾಧಾಕೃಷ್ಣ ಪೈ, ಖಜಾಂಜಿ ಪ್ರಭಾಕರ ಶೆಟ್ಟಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲೆಯರು, ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಹ ಶಿಕ್ಷಕಿ ನಂದಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.








