- Advertisement -
- Advertisement -





ಮಂಗಳೂರು: ಲಯನ್ಸ್ ಸೇವಾ ಟ್ರಸ್ಟ್ ವತಿಯಿಂದ ಜಿಲ್ಲೆಯ ಆರು ಲಯನ್ಸ್ ಕ್ಲಬ್ಗಳಿಗೆ ತಲಾ ₹51,000 ಆರ್ಥಿಕ ನೆರವು ನೀಡಲಾಯಿತು.ಈ ಸಂದರ್ಭದಲ್ಲಿ ಫೌಂಡರ್ ಟ್ರಸ್ಟಿ ಹಾಗೂ ಮಾಜಿ ಗವರ್ನರ್ ಕಿಶೋರ್ ರಾವ್, ಮಾಜಿ ಗವರ್ನರ್ ಕೆ.ಸಿ. ಪ್ರಭು, ನಿಕಟ ಪೂರ್ವ ಗವರ್ನರ್ ಕುಡ್ಪಿ ಅರವಿಂದ ಶೆಣೈ, ಪ್ರಥಮ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ ಹಾಗೂ ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್ ಉಪಸ್ಥಿತರಿದ್ದರು.ಲಯನ್ಸ್ ಕ್ಲಬ್ ಕುಡ್ಲ, ಲಯನ್ಸ್ ಕ್ಲಬ್ ಮಂಗಳಾದೇವಿ, ಲಯನ್ಸ್ ಕ್ಲಬ್ ಹೈಲ್ಯಾಂಡ್, ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್, ಲಯನ್ಸ್ ಕ್ಲಬ್ ಕಲ್ಲಮುಂಡ್ಕೂರು ಹಾಗೂ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ಗಳ ಅಧ್ಯಕ್ಷರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

- Advertisement -








