Wednesday, September 16, 2026
spot_imgspot_img
spot_imgspot_img

ವಿಟ್ಲ ಪೊಲೀಸರ ಕಾರ್ಯಾಚರಣೆ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಸೆ. 14 ರಂದು ರಾತ್ರಿ ಕೇರಳ ಕಡೆಯಿಂದ ಕನ್ಯಾನ ಕಡೆಗೆ ಲಾರಿಯಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪಿಎಸ್ಐ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನೆಲ್ಲಿಕಟ್ಟೆ ಜಂಕ್ಷನ್ ಬಳಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ KA-21-D-0784 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಅಥವಾ ದಾಖಲೆ ಇಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಕಂಡುಬಂದಿದ್ದು, ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ಚಾಲಕ ವೀರಕಂಭ ನಿವಾಸಿ ಮೊಹಮ್ಮದ್ ತೌಕಿರ್ (26), ಮಾಲೀಕ ಮೊಹಮ್ಮದ್ ಸಿಮ್ರಾನ್ ಹಾಗೂ ಸಹಕರಿಸಿದ ಸಜೀರ್ ಎಂಬವರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರ 193/2026, ಕಲಂ 303(2) BNS, 4(1), 4(1A), 21 MMDR Act 1957 ಮತ್ತು ಕಲಂ 3,44 KMMC Rule 1994 ರಂತೆ ಪ್ರಕರಣ ದಾಖಲಿಸಿದ್ದಾರೆ.

ಅದೇ ದಿನ ತಡರಾತ್ರಿ ಕುದ್ದುಪದವು ಮಾರ್ಗವಾಗಿ ಕಲ್ಲಡ್ಕ-ಕಾಂಞಗಾಡ್ ಅಂತರರಾಜ್ಯ ಹೆದ್ದಾರಿಯಲ್ಲಿ KA-70-A-1926 ನಂಬರಿನ ಟಿಪ್ಪರ್ ಲಾರಿಯಲ್ಲಿ ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದುದನ್ನು ಪಿಎಸ್ಐ ರಾಮಕೃಷ್ಣ ಅವರು ಪತ್ತೆ ಮಾಡಿದ್ದಾರೆ. ಲಾರಿ ವಶಪಡಿಸಿಕೊಂಡು ಬೆಳ್ತಂಗಡಿ ಕನ್ಯಾಡಿ ನಿವಾಸಿ ಚಂದ್ರೇಶ್ (40) ವಿರುದ್ಧ ವಿಟ್ಲ ಠಾಣೆಯಲ್ಲಿ ಅಕ್ರ 194/2026, ಕಲಂ: 303(2) BNS, 4(1), 4(1A), 21 MMDR (MINES AND MINERALS REGULATION OF DEVELOPMENT) ACT 1957 ಕಲಂ. 3, 44 KARNATAKA MINOR MINERAL CONSISTENT RULE 1994 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!