- Advertisement -
- Advertisement -
ಚಿಕ್ಕಬಳ್ಳಾಪುರ: ಸೋಮವಾರದಿಂದ ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಇಂದು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಚಿವರು ಶನಿವಾರ ಕೇಂದ್ರದಿಂದ ರಾಜ್ಯಕ್ಕೆ 13 ಲಕ್ಷದ 90 ಸಾವಿರ ಕೋವಿಡ್-19 ಲಸಿಕೆ ಬರಲಿದ್ದು ಸೋಮವಾರದಿಂದ ಲಸಿಕೆ ಹಾಕಲಿದ್ದೇವೆ. ಎಲ್ಲಾ ಜಿಲ್ಲೆಗಳಿಗೂ ಸರಬರಾಜು ಮಾಡಲಿದ್ದೇವೆ ಎಂದರು.
ಕೋವಿಡ್-19 ಕಂಟ್ರೋಲ್ ಮಾಡೋದ್ರಲ್ಲಿ ಭಾರತ ಯಶಸ್ವಿಯಾಗಿದೆ. ಇಡೀ ದೇಶದಲ್ಲಿ 9000 ಸಕ್ರಿಯ ಪ್ರಕರಣಗಳಿದ್ದು, ಶೇ.98ರಷ್ಟು ಜನ ಗುಣಮುಖರಾಗುತ್ತಿದ್ದಾರೆ. ಶೇ.1.2 ರಿಂದ ಶೇ.1.3 ರಷ್ಡು ಸಾವಿನ ಪ್ರಮಾಣ ಆಗಿದೆ. ಈ ಅಂಕಿ ಅಂಶಗಳೇ ರಾಜ್ಯಸರ್ಕಾರ ಯಶಸ್ವಿಯಾಗಿ ಕೊರೊನಾ ನಿರ್ವಹಣೆ ಮಾಡಿದೆ ಅನ್ನೋದಕ್ಕೆ ನಿದರ್ಶನ ಲಸಿಕೆಯ ವಿವರಗಳನ್ನ ಸಂಜೆಯೊಳಗೆ ತಿಳಿಸುತ್ತೇನೆ ಎಂದು ಮಾಹಿತಿ ನೀಡಿದರು.
- Advertisement -