- Advertisement -
- Advertisement -
ಮಂಗಳೂರು: ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋಗುತ್ತಿದ್ದ ಯುವತಿಯನ್ನು ಕರಾವಳಿ ಕಾವಲು ಪಡೆ ಪೊಲೀಸರು ರಕ್ಷಿಸಿದ ಘಟನೆ ಉಳ್ಳಾಲದ ಸೋಮೇಶ್ವರ ಬೀಚ್ನಲ್ಲಿ ನಡೆದಿದೆ.
ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಯುವತಿ ಸ್ನೇಹಿತೆಯರೊಂದಿಗೆ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದರು. ಕಡಲಿಗೆ ಇಳಿದು ಆಟವಾಡುತ್ತಿದ್ದ ವೇಳೆ ಭಾರೀ ಅಲೆಯ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು. ಸ್ಥಳದಲ್ಲೇ ಇದ್ದ ಕಾವಲು ಪಡೆ ಸಿಬ್ಬಂದಿ ಯುವತಿಯನ್ನು ರಕ್ಷಿಸಿದ್ದಾರೆ.
- Advertisement -