- Advertisement -
- Advertisement -
ಶಬರಿಮಲೆ: ಪ್ರಸಿದ್ದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶಬರಿಮಲೆ ಮಕರ ಜ್ಯೋತಿ ದರ್ಶನಕ್ಕೆ ಸಜ್ಜಾಗಿದೆ. ಗುರುವಾರ ಮಕರ ಜ್ಯೋತಿ ದರ್ಶನವಾಗಲಿದೆ. ಕೊರೋನಾದ ಹಿನ್ನೆಲೆಯಲ್ಲಿ ಎಲ್ಲ ಆರೋಗ್ಯಮಾರ್ಗ ಸೂಚಿ ಕ್ರಮಗಳನ್ನು ಪಾಲಿಸಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಕರ ಜ್ಯೋತಿ ವೇಳೆ 5000 ಭಕ್ತರಿಗೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಪ್ರತಿವರ್ಷ ಲಕ್ಷಾಂತರ ಅಯ್ಯಪ್ಪ ಭಕ್ತರು ಮಕರ ಜ್ಯೋತಿಯಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯುತ್ತಿದ್ದರು. ರಾಜ್ಯದ ಬಹುತೇಕ ಅಯ್ಯಪ್ಪ ಭಕ್ತರು ಶಬರಿಮಲೆಗೆ ತೆರಳದೆ ಭವನಂ ಸನ್ನಿಧಾನಂ ಎಂಬ ಹೆಸರಿನಡಿಯಲ್ಲಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡುತ್ತಿದ್ದಾರೆ.
- Advertisement -