Tuesday, April 30, 2024
spot_imgspot_img
spot_imgspot_img

ಮಿನಿ ಬಸ್ ಹಾಗೂ ಟಿಪ್ಪರ್ ನಡುವೆ ಭೀಕರ ಅಫಘಾತ – 11 ಮಂದಿ ಸ್ಥಳದಲ್ಲಿಯೇ ದುರ್ಮರಣ!

- Advertisement -G L Acharya panikkar
- Advertisement -

ಧಾರವಾಡ: ಧಾರವಾಡ ದ ಇಟ್ಟಿಗಟ್ಟಿ ಬಳಿ ಮಿನಿ ಬಸ್ ಹಾಗೂ ಟಿಪ್ಪರ್ ನಡುವೆ ಭೀಕರ ಅಫಘಾತ ಸಂಭವಿಸಿದೆ. ಅಫಘಾತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

ಸಂಕ್ರಮಣದ ನಿಮಿತ್ತ ದಾವಣಗೆರೆಯಿಂದ ಗೋವಾಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಿನಿ ಬಸ್ ನಲ್ಲಿ ಒಟ್ಟು 20 ಮಂದಿ ತೆರಳುತ್ತಿದ್ದು, ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಸಂಚರಿಸುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಟಿಪ್ಪರ್ ಮಿನಿ ಬಸ್ ಗೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ 9 ಮಹಿಳೆಯರು, ಓರ್ವ ಬಾಲಕ ಸೇರಿದಂತೆ ಒಟ್ಟು 11 ಮಂದಿ ಸ್ಥಳದಲ್ಲಿ ಯೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಸ್ಥಳಕ್ಕೆ ಎಸ್ ಪಿ ಕೃಷ್ಣಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!