Friday, June 27, 2025
spot_imgspot_img
spot_imgspot_img

ವಿಶ್ವ ಹಿಂದು ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮೇಲೆ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಸಹಾಯಕ ಪೊಲೀಸ್ ಆಯುಕ್ತರಿಗೆ ಮನವಿ

- Advertisement -
- Advertisement -

ಮಂಗಳೂರು: -ವಿಶ್ವ ಹಿಂದೂ ಪರಿಷದ್ ಬಜರಂಗದಳ ಇತ್ತೀಚಿನ ದಿನಗಳಲ್ಲಿ ಆಧುನಿಕ ಅಂತರ್ಜಾಲದ ಮೂಲಕ ಅನಗತ್ಯ ವಿಷಯಗಳನ್ನು ಸೇರಿಸಿ ವಿಶ್ವ ಹಿಂದು ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮೇಲೆ ನಿರಾಧಾರ ಸುಳ್ಳು ಆರೋಪಗಳ ಮೂಲಕ ಅಪಪ್ರಚಾರ ಮಾಡಿ ಮತ್ತು

ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿರುವ ವಿಷಯ ಬಹಳ ಖೇಧಕಾರಿಯಾಗಿದ್ದು ಇದರ ಹಿಂದಿರುವ ಕಿಡಿಕೇಡಿಗಳನ್ನು ಪತ್ತೆಹಚ್ಚಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ವಿಷಯ ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಮಂಗಳೂರು ವತಿಯಿಂದ ಸಹಾಯಕ ಪೊಲೀಸ್ ಆಯುಕ್ತರಿಗೆ ಗೆ ಮನವಿ ನೀಡಲಾಯಿತು.

ವಿಭಾಗ ಬಜರಂಗದಳ ಸಂಚಾಲಕ್ ಭುಜಂಗ ಕುಲಾಲ್, ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ, ಜಿಲ್ಲಾ ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪವೆಲ್ ಈ ಸಂಧರ್ಭದಲ್ಲಿ ಉಪಸ್ಥಿತಿ ಇದ್ದರು.

- Advertisement -

Related news

error: Content is protected !!