Monday, July 7, 2025
spot_imgspot_img
spot_imgspot_img

ಎಂ ಎಸ್ಸಿ ಕಲಿಯುತ್ತಿದ್ದ ಪ್ರೇಯಸಿಯನ್ನು ಕೊಂದು ಪ್ರಿಯತಮ ಆತ್ಮಹತ್ಯೆ

- Advertisement -
- Advertisement -

ಮೈಸೂರು: ಈಗಾಗಲೇ ಮದುವೆಯಾಗಿದ್ದ ಪ್ರಿಯತಮನೊಬ್ಬ ತನ್ನ ಪ್ರೇಯಸಿಯನ್ನು ಹತ್ಯೆ ಮಾಡಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹೊಂಬಾಳೆ ಕೊಪ್ಪಲು ಗ್ರಾಮದ ಎಂ ಲೋಕೇಶ್ ಈ ಕೃತ್ಯ ಎಸಗಿದ್ದಾನೆ.

ಲೋಕೇಶ್ ವೃತ್ತಿಯಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರನಾಗಿದ್ದ. ಮೈಸೂರಿನ ಕಾಲೇಜೊಂದರಲ್ಲಿ ಎಂ ಎಸ್ಸಿ ಕಲಿಯುತ್ತಿದ್ದ ಅಮೂಲ್ಯ ಎಂಬ ಹುಡುಗಿಯನ್ನು ಪ್ರೀತಿಸುತ್ತಿದ್ದ. ಇತ್ತೀಚಿನ ದಿನಗಳಲ್ಲಿ ಅಮೂಲ್ಯ ಮದುವೆಯಾಗಲು ಒತ್ತಡ ಹೇರಿದ್ದಳು ಎಂದು ವರದಿಯಾಗಿದೆ.

ಮೈಸೂರಿನ ಹೋಟೆಲ್ ವೊಂದರಲ್ಲಿ ರೂಮ್ ಬುಕ್ ಮಾಡಿದ್ದ ಲೋಕೇಶ್ ಮೊದಲು ಅಮೂಲ್ಯಳನ್ನು ಹತ್ಯೆ ಮಾಡಿ ಬಳಿಕ ತಾನು ಕೂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!