ಪುತ್ತೂರು: ನೂತನ ವ್ಯವಸ್ಥಾಪನಾ ಸಮಿತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಅಧ್ಯಕ್ಷರಾಗಿ ಶ್ರೀ ಮುಳಿಯ ಕೇಶವ ಪ್ರಸಾದ್ ಅವರು ಆಯ್ಕೆಯಾಗಿದ್ದಾರೆ.
ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಪ್ರಧಾನ ಅರ್ಚಕ ಕೆ.ವೆಂಕಟೇಶ್ ಸುಬ್ರಹ್ಮಣ್ಯ ಭಟ್, ಶ್ರೀಮತಿ ವೀಣಾ,ಶ್ರೀಮತಿ ಡಾ.ಸುಧಾ ಶೀಪತಿ ರಾವ್,ಎಸ್ ಟಿ ಐತಪ್ಪ ನಾಯ್ಕ , ರವೀಂದ್ರನಾಥ ರೈ,ರಾಮದಾಸ ಗೌಡ,ಶೇಖರ್ ನಾರಾವಿ,ರಾಮಚಂದ್ರ ಕಾಮತ್ ಆಯ್ಕೆಗೊಂಡಿದ್ದಾರೆ.
ಫೆ.8 ರಂದು ಬೆಳಿಗ್ಗೆ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಥಮ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ,ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೇಕೋಡಿ ಸೂರ್ಯನಾರಾಯಣ ಭಟ್,ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ,ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ,ನಗರಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ನ್ಯಾಯವಾದಿ ಇ.ಶಿವಪ್ರಸಾದ್,ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ,ವಿವೇಕಾನಂದ ವಿದ್ಯಾವರ್ಧಕ ಸಂಘದ ರವೀಂದ್ರ.ಪಿ, ಜಿಲ್ಲಾ ಪಂಚಾಯತ್ ಸದಸ್ಯೆ ಶಯನಾ ಜಯನಂದ ಹಾಗು ಮತ್ತಿತರು ಉಪಸ್ಥಿತರಿದ್ದರು.