Sunday, June 29, 2025
spot_imgspot_img
spot_imgspot_img

ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು- ಕೊಲೆ ಆರೋಪಿ ಕಾಲಿಗೆ ಗುಂಡೇಟು

- Advertisement -
- Advertisement -

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ರೌಡಿಶೀಟರ್‌ ಮೇಲೆ ಶೂಟೌಟ್‌ ಮಾಡಿ ಬಂಧಿಸಲಾಗಿದೆ. ನಗರದ ಜಿಕೆಡಬ್ಲ್ಯೂ ಲೇಔಟ್ ನಲ್ಲಿ ರೌಡಿ ಶೀಟರ್ ಸಂತೋಷ್ ಅಲಿಯಾಸ್ ಇಲಿಕುಟ್ಟಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ಕಳೆದ ತಿಂಗಳು ನಡೆದಿದ್ದ ಶ್ರೀನಿವಾಸ್ ಕೊಲೆ ಪ್ರಕರಣದಲ್ಲಿ ಆರೋಪಿ ಶೀನಿವಾಸ್‌ ಪೊಲೀಸರಿಗೆ ಬೇಕಾಗಿದ್ದ. ಶ್ರೀನಿವಾಸ್ ಕತ್ತಿಗೆ ಮನಬಂದಂತೆ ಲಾಂಗ್‌ ಬೀಸಿ ಸಂತೋಷ್‌ ಕೊಲೆ ಮಾಡಿದ್ದ.

ಈ ಪ್ರಕರಣ ಸಂಬಂಧ ಬಂಧನಕ್ಕೆ ತೆರಳಿದಾಗ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಸಂತೋಷ್‌ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಆತ್ಮ ರಕ್ಷಣೆಗಾಗಿ ರಾಜಗೋಪಾಲ ನಗರ ಪಿಎಸ್ಐ ಹನುಮಂತ ಹಡಿಮನಿ ಅವರು ಕಾಲಿಗೆ ಗುಂಡು ಹಾರಿಸಿ ಶ್ರೀನಿವಾಸ್‌ನನ್ನು ಬಂಧಿಸಿದ್ದಾರೆ.

ಹೆಡ್ ಕಾನ್ಸ್ ಟೇಬಲ್‌ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!