- Advertisement -
- Advertisement -
ಬೆಂಗಳೂರು: ಕೇರಳದ ಎರ್ನಾಕುಳಂನಲ್ಲಿ ನಡೆದ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ರವಿ ಪೂಜಾರಿ ವಿಚಾರಣೆಗೆ ಕೇರಳ ಪೊಲೀಸರಿಗೆ ಅನುಮತಿ ನೀಡಲಾಗಿದೆ.
ಪರಪ್ಪನ ಅಗ್ರಹಾರದಲ್ಲಿಯೇ ಔಪಚಾರಿಕವಾಗಿ ಬಂಧಿಸಿ ವಿಚಾರಣೆ ನಡೆಸಲು ನಗರದ 65ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿದೆ. ಎರ್ನಾಕುಳಂ ನ ಬ್ಯೂಟಿ ಪಾರ್ಲರ್ ನಲ್ಲಿ ನಡೆದ ಗುಂಡು ಹಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಕೇರಳದ ವಿವಿಧ ಪೊಲೀಸ್ ಠಾಣೆಗಳಲ್ಲಿ ರವಿ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
- Advertisement -