- Advertisement -
- Advertisement -
ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇದರ ಆಶ್ರಯದಲ್ಲಿ ಕನ್ನಡ ಭವನ ಉದ್ಘಾಟನೆ ,ಸಾರ್ವಜನಿಕ ರಂಗಮಂದಿರ ಲೋಕಾರ್ಪಣೆ ಹಾಗೂ ರಾಜ್ಯ ಮಟ್ಟದ ಪುಸ್ತಕ ಸಂತೆ, ಪ್ರದರ್ಶನ ಮಾರಾಟ ಮತ್ತು ಬಂಟ್ವಾಳ ತಾಲೂಕು 21ನೇ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ದೊರಕಿತು.
ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ, ಜೆ ಸಿ ಐ ಜೋಡುಮಾರ್ಗ ನೇತ್ರಾವತಿ ಬಿ.ಸಿ ರೋಡ್, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ) ಬಾಳ್ತಿಲ ಇದರ ಸಹಯೋಗದಲ್ಲಿ ಕನ್ನಡ ಭುವನೇಶ್ವರಿ ಮೆರವಣಿಗೆ ನಡೆಯಿತು.
ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ) ಬಾಳ್ತಿಲ ಇದರ ಸಂಸ್ಥಾಪಕರು, ವಕೀಲರು ಮತ್ತು ಜೆಸಿಐ ಜೋಡುಮಾರ್ಗ ನೇತ್ರಾವತಿ ಇದರ ಅಧ್ಯಕ್ಷರಾದ ಶ್ರೀಮತಿ ಶೈಲಜಾರಾಜೇಶ್ ಕನ್ನಡ ಭುವನೇಶ್ವರಿಯಾಗಿ ಸರ್ವಾಲಂಕೃತ ಭೂಷಿತೆಯಾಗಿ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದರು. ಈ ಮೆರವಣಿಗೆಯಲ್ಲಿ ಜೆಸಿಐ ಕಾರ್ಯದರ್ಶಿ ಮಲ್ಲಿಕಾ ಆಳ್ವ, ಸದಸ್ಯರಾದ ಸಿನಾನ್ ಕಡೇಶ್ವಾಲಯ, ರಮ್ಯಾ,ಚೈತ್ರ ಪಾಲ್ಗೊಂಡಿದ್ದರು.
- Advertisement -