- Advertisement -
- Advertisement -
ಬಂಟ್ವಾಳ: 2017ರಲ್ಲಿ ಬಂಟ್ವಾಳ ತಾಲೂಕಿನ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾಳ್ತಿಲ ಗ್ರಾಮದ ನಿವಾಸಿ ರಾಜೇಶ್ ಎಂಬಾತ ತನ್ನ ದೊಡ್ಡಪ್ಪನ ಮಗ ರಂಜಿತ್ ನನ್ನು ಕೊಲೆ ಮಾಡಿ ಜೈಲು ಸೇರಿದ್ದನು.
ರಾಜೇಶ್ಗೆ ಪ್ರಸ್ತುತ ನ್ಯಾಯಾಲಯ ವಿಚಾರಣೆ ನಡೆಸಿ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ಅ. ಕ್ರ 131/2017 ಕಲಂ 447,324,302 ಐಪಿಸಿ ಪ್ರಕರಣದಲ್ಲಿ ಆರೋಪಿ ರಾಜೇಶ್ ಯಾನೆ ನವೀನ್ ಎಂಬುವವನು ತನ್ನ ದೊಡ್ಡಪ್ಪನ ಮಗ ರಂಜಿತ್ ಎಂಬಾತನನ್ನು ಚೂರಿಯಿಂದ ಚುಚ್ಚಿ ಕೊಲೆಗೈದು ಜೈಲು ಸೇರಿದ್ದನು ಈತನಿಗೆ ನ್ಯಾಯಾಲಯವು ವಿಚಾರಣೆ ನಡೆಸಿ ಜೀವಾವಧಿ ಶಿಕ್ಷೆ ನೀಡಿದೆ.
- Advertisement -