Saturday, June 28, 2025
spot_imgspot_img
spot_imgspot_img

ಪುತ್ತೂರು: ಕೋಟಿ ಚೆನ್ನಯ ಜೋಡು ಕರೆ ಕಂಬಳಕ್ಕೆ ಚಾಲನೆ-ಎನ್. ಮುತ್ತಪ್ಪ ರೈ ಯವರ ಅನುಪಸ್ಥಿತಿಯನ್ನು ಸ್ಮರಿಸಿದ ಕಂಬಳಾಭಿಮಾನಿಗಳು

- Advertisement -
- Advertisement -

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯುವ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಉದ್ಘಾಟಿಸಿದರು.

ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸೀತಾರಾಮ ರೈ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸುದಾನ ವಿದ್ಯಾಸಂಸ್ಥೆ ಸಂಚಾಲ ರೇ ವಿಜಯ ಹಾರ್ವೀನ್, ಹಾಜಿ ಅಬ್ದುಲ್ ರಜಾಕ್ ಹಾಜಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ. ವಿ, ಸಂಚಾಲಕ ಎನ್ ಸುಧಾಕರ ಶೆಟ್ಟಿ ಅತಿಥಿಗಳನ್ಬು ಗೌರವಿಸಿದರು. ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ಮುತ್ತಪ್ಪ ರೈ ಇಲ್ಲದೆ ಕಳೆಗುಂದಿದ ಪುತ್ತೂರು ಕೂಟ :

ಇಷ್ಟು ವರ್ಷದಿಂದ ಪುತ್ತೂರು ಕಂಬಳ ಕೂಟ ನೇತೃತ್ವ ವಹಿಸಿಕೊಳ್ಳುತ್ತಿದ್ದ ಜಯಕರ್ನಾಟಕ ಸಂಸ್ಥಾಪಕ ಎನ್. ಮುತ್ತಪ್ಪ ರೈ ಅವರ ಅನುಪಸ್ಥಿತಿ, ಕಂಬಳ ಕೂಟದ ಕಳೆಗುಂದಿಸಿದೆ ಎಂಬ ಅಭಿಪ್ರಾಯ ಪುತ್ತೂರಿನ ಕಂಬಳಾಭಿಮಾನಿಗಳು ಆಡಿಕೊಳ್ಳುತ್ತಿದ್ದರು.

- Advertisement -

Related news

error: Content is protected !!