Friday, June 27, 2025
spot_imgspot_img
spot_imgspot_img

ಉಪ್ಪಿನಂಗಡಿ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ-ಮೂವರಿಗೆ ಗಂಭೀರ ಗಾಯ!

- Advertisement -
- Advertisement -

ಉಪ್ಪಿನಂಗಡಿ: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಇಲ್ಲಿನ ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸುಧಾಕರ್, ಲೋಕಯ್ಯ, ರವಿ ಎಂದು ಗುರುತಿಸಲಾಗಿದೆ.

ಈ ಮೂವರು ಬೈಕ್ ನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದರು. ಇದೇ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಕಾಂಚನ ಕ್ರಾಸ್ ಬಳಿ ಢಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಮತ್ತು ಬೈಕ್ ನಜ್ಜುಗುಜ್ಜಾಗಿದೆ. ಗಾಯಗೊಂಡ ಮೂವರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!