Wednesday, September 2, 2026
spot_imgspot_img
spot_imgspot_img

ಜೈ ಜನ್ಮಭೂಮಿ ರಕ್ಷಣಾ ಪಡೆಯ 4ನೇ ವರ್ಷದ ವಾರ್ಷಿಕೋತ್ಸವ

- Advertisement -
- Advertisement -


ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸುಂಡೂರಿನಲ್ಲಿ ನಡೆದ ಜೈ ಜನ್ಮಭೂಮಿ ರಕ್ಷಣಾ ಪಡೆಯ 4 ನೇ ವಾರ್ಷಿಕೋತ್ಸವ ಎ.11 ರಂದು ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೈಜನ್ಮ ಭೂಮಿ ರಕ್ಷಣಾ ಪಡೆಯ ರಾಜ್ಯಾಧ್ಯಕ್ಷರಾದ ಡಾ.ಸೈಯದ್‌ ಅಮೀನ್ ವಹಿಸಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೈಜನ್ಮಭೂಮಿ ರಕ್ಷಣಾ ಪಡೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಫೈರೋಜ್ ಖಾನ್,ರಾಜ್ಯ ಉಪಾಧ್ಯಕ್ಷರಾದ ಸೈಯದ್ ದಾವಣಗೆರೆ ,ಜೈ ಜನ್ಮಭೂಮಿ ರಕ್ಷಣಾ ಪಡೆಯ ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ನಾಗರತ್ನ,ಹಾಸನ ಜಿಲ್ಲಾಧ್ಯಕ್ಷರಾದ ರಿಯಾಜ್,ರಾಜ್ಯ ಯುವ ಘಟಕದ ಅಧ್ಯಕ್ಷರಾದ ಅಸ್ಗರ್ ಪಾಶ,ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾದ ಜಬಿಖಾನ್ ಬಳ್ಳಾರಿ, ಜಿಲ್ಲಾಧ್ಯಕ್ಷರಾದ ರಾಜುಖಾನ್,ಹಾಗೂ ಮಂಗಳೂರು ಜೈಜನ್ಮ ಭೂಮಿ ರಕ್ಷಣಾ ಪಡೆಯ ಜಿಲ್ಲಾಧ್ಯಕ್ಷರಾದ ಇಕ್ಬಾಲ್ ಪೆರಿಗೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .

ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು ಸಮಾರಂಭದಲ್ಲಿ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಸಮಾಜಸೇವೆಯಲ್ಲಿ ತೊಡಗಿದ ಗಣ್ಯರನ್ನು ಸನ್ಮಾನಿಸಲಾಯಿತು .

- Advertisement -

Related news

error: Content is protected !!