Tuesday, April 30, 2024
spot_imgspot_img
spot_imgspot_img

ಮಂಗಳೂರು: ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಸಭೆ

- Advertisement -G L Acharya panikkar
- Advertisement -

ಮುಂಗಾರು ಋತು ಸಮೀಪಿಸುತ್ತಿದ್ದು, ಅದಕ್ಕೆ ಪೂರ್ವ ಸಿದ್ಧತೆಯ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಭೆ ನಡೆಯಿತು.

ದೇಶದ ಹಲವಾರು ರಾಜ್ಯಗಳಲ್ಲಿ ಎದ್ದಿರುವ ತೌಕ್ತೇ ಚಂಡಮಾರುತವು ರಾಜ್ಯದ ಕರಾವಳಿ ಭಾಗದಲ್ಲೂ ಭೀತಿಯನ್ನುಂಟುಮಾಡುತ್ತಿದ್ದು ಕಡಲ ಕೊರೆತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಚಂಡಮಾರುತದಿAದ ಉಂಟಾದ ನಷ್ಟ ಹಾಗೂ ಅದನ್ನು ಎದುರಿಸಲು ಕೈಗೊಂಡ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು. ಈಗಾಗಲೇ ಎನ್.ಡಿ.ಆರ್.ಎಫ್. ತಂಡವು ರಕ್ಷಣಾ ಕಾರ್ಯಕ್ಕೆ ಸಿದ್ಧರಾಗಿದ್ದು ಯಾವುದೇ ಪರಿಸ್ಥಿತಿ ಎದುರಾದರೂ ಎದುರಿಸಲು ಸಜ್ಜಾಗಿರಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಜಿಲ್ಲೆಯ ಶಾಸಕರು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!