- Advertisement -
- Advertisement -
ಪುತ್ತೂರು: ಲಾಕ್ಡೌನ್ ಹಿನ್ನಲೆಯಲ್ಲಿ ಅಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ರೂ.3000 ಪರಿಹಾರ ಧನವನ್ನು ನೀಡಲು ಸರಕಾರ ಮಂಜೂರಾತಿ ನೀಡಿದ್ದು ಸದರಿ ಪರಿಹಾರ ಧನಕ್ಕಾಗಿ ಆನ್ಲೈನ್ ಮೂಲಕ ಸೇವಾ ಸಿಂಧು ವೆಬ್ ಪೋರ್ಟಲ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಮೇ 27ರಂದು ಬೆಳಿಗ್ಗೆ 11 ಗಂಟೆಯಿಂದ ಪ್ರಾರಂಭಗೊಳ್ಳುತ್ತದೆ.

ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಸೇವಾ ಸಿಂಧು ಅಂತರ್ಜಾಲದಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಧನ ಪಡೆಯಬಹುದು. ಅರ್ಹ ಫಲಾನುಭವಿಗಳಿಗೆ ಪರಿಹಾರ ಧನವನ್ನು ಅವರ ಖಾತೆಗೆ ನೇರವಾಗಿ ಡಿ.ಬಿ.ಟಿ ಮೂಲಕ ವರ್ಗಾಯಿಸಲಾಗುವುದು. ಅಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರು ಇದರ ಪ್ರಯೋಜನ ಪಡೆಯುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ತಿಳಿಸಿದ್ದಾರೆ.



- Advertisement -