Wednesday, May 1, 2024
spot_imgspot_img
spot_imgspot_img

ಮಂಗಳೂರು: ಪಿಡಿಓ ಹಲ್ಲೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ!

- Advertisement -G L Acharya panikkar
- Advertisement -

ಮಂಗಳೂರು: ಪಿಡಿಓ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಎನ್‌. ಶಶಿಕುಮಾರ, ‘ಮೊಹಮ್ಮದ್ ಇರಾಯತುಲ್ಲಾ, ಫರಂಗಿಪೇಟೆ ನಿವಾಸಿ ಅಹ್ಮದ್ ಬಸೀರ್, ಕುತ್ತಾರ್ ನಿವಾಸಿ ಅಬೂಬಕ್ಕರ್ ಸಿದ್ದಿಕೂರ್, ಅಬ್ದುಲ್ ಸಿದ್ದಿಕ್ ಎಂಬುವವರನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಮನ್ಸೂರ್ ಅಲಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮೇ 25ರಂದು ಪಿಡಿಒ ರಾಜೇಂದ್ರ ಶೆಟ್ಟಿ ಅವರು ಗ್ರಾಮ ಪಂಚಾಯಿತಿ ಕಚೇರಿಯ ಸಮೀಪದಲ್ಲಿದ್ದ ಐದು ಮಂದಿ ಯುವಕರಿಗೆ ಮಾಸ್ಕ್ ಧರಿಸಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಹೇಳಿದ್ದರು. ಆದರೆ ಆ ಯುವಕರ ತಂಡ ಆಕ್ಷೇಪ ವ್ಯಕ್ತಪಡಿಸಿ ಪಿಡಿಒ ಮೇಲೆ ಹಲ್ಲೆ ನಡೆಸಿತ್ತು.

ಆರೋಪಿ ಮಹಮ್ಮದ್ ಇದಾಯತುಲ್ಲಾ ಮತ್ತು ಅಹ್ಮದ್‌ ಬಸೀರ್‌ ವಿರುದ್ಧ ಈಗಾಗಲೇ ಮಂಗಳೂರು ಗ್ರಾಮಾಂತರ ಠಾಣೆ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ದಕ್ಷಿಣ ಠಾಣೆಯಲ್ಲಿ ಅನೇಕ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

driving
- Advertisement -

Related news

error: Content is protected !!