Saturday, June 28, 2025
spot_imgspot_img
spot_imgspot_img

ಉಡುಪಿ: ಕೊಲೆ ಪ್ರಕರಣ – ಬಿಜೆಪಿ ನಾಯಕ ಸೇರಿದಂತೆ ಮತ್ತಿಬ್ಬರ ಬಂಧನ!

- Advertisement -
- Advertisement -

ಉಡುಪಿ: ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಉದಯ ಕುಮಾರ್ ಗಾಣಿಗ ಅವರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಅಗ್ರಹಾರ ಹಾಗೂ ಯಡಮೊಗೆ ನಿವಾಸಿ ರಾಜೇಶ್ ಭಟ್ ಎಂಬವರೇ ಬಂಧಿತರಾಗಿದ್ದು, ಕೊಲೆ ಪ್ರಕರಣದಲ್ಲಿ ರಾಜೇಶ್ ಭಟ್ ನೇರವಾಗಿ ಭಾಗಿಯಾಗಿರುವುದಾಗಿ ಮತ್ತು ಬಾಲಚಂದ್ರ ಭಟ್ ಅಗ್ರಹಾರ ಕೊಲೆಗೆ ಕುಮ್ಮಕ್ಕು ನೀಡಿರುವುದಾಗಿ ಮೃತರ ಪತ್ನಿ ಜ್ಯೋತಿ ಗಾಣಿಗ ನೀಡಿರುವ ದೂರಿನಲ್ಲಿ ತಿಳಿಸಿದ್ದರು.

ಕೊಲೆ ನಡೆದ ಬಳಿಕ ಇವರಿಬ್ಬರು ತಲೆಮರೆಸಿಕೊಂಡಿದ್ದು, ಈ ಬಗ್ಗೆ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಈ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕೃತ್ಯದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಬಗ್ಗೆ ಶಂಕೆ ಇದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಈಗಾಗಲೇ ಬಂಧಿತರಾಗಿರುವ ಪ್ರಮುಖ ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಪೊಲೀಸರು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ಕೊಳವೆ ಬಾವಿಗೆ ಎನ್‌ಓಸಿ ನೀಡುವ ವಿಚಾರ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ವಿಧಿಸಿರುವ ಸಂಪೂರ್ಣ ಲಾಕ್‌ಡೌನ್ ವಿರುದ್ಧದ ವಾಟ್ಸಾಪ್ ಸ್ಟೇಟಸ್‌ನ ದ್ವೇಷದಲ್ಲಿ ಗ್ರಾಪಂ ಅಧ್ಯಕ್ಷರ ನೇತೃತ್ವ ತಂಡ ಜೂ.5ರಂದು ರಾತ್ರಿ ವೇಳೆ ಉದಯ ಗಾಣಿಗ ಅವರಿಗೆ ಕಾರು ಢಿಕ್ಕಿ ಹೊಡೆಸಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!