Friday, June 27, 2025
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರಿಕೆ; ಸಚಿವ ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಮಂಗಳೂರು: ಕೆಲವು ಕೈಗಾರಿಕೆಗಳಿಗೆ ವಿನಾಯಿತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ಹೇರಿಕೆ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮ ರೂಪಿಸಲು ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ಹೇರಿಕೆ ಮಾಡುತ್ತೇವೆ ಎಂದಿದ್ದಾರೆ.

ಕೂಲಿ ಕಾರ್ಮಿಕರು, ಕೈಗಾರಿಕಾ ಕಾರ್ಮಿಕರಿಗೆ ನೆರವಾಗುವುದರ ಜೊತೆಗೆ ಕೆಲವು ಸೀಮಿತ ವಿಷಯಗಳಿಗೆ ರಿಯಾಯಿತಿ ನೀಡಲು ನಾಳೆ ಶಾಸಕರು ಹಾಗೂ ಸಂಸದ ಸಭೆಯನ್ನು ನಡೆಸುತ್ತೇವೆ, ನಂತರದಲ್ಲಿ ಲಾಕ್ ಡೌನ್ ಮಾರ್ಗಸೂಚಿಯನ್ನು ಹೊರಡಿಸುವುದಾಗಿ ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!