Saturday, June 28, 2025
spot_imgspot_img
spot_imgspot_img

ಮಂಗಳೂರು: ಮಗನಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ; ಪಾಪಿ ತಂದೆ ಅರೆಸ್ಟ್!

- Advertisement -
- Advertisement -

ಮಂಗಳೂರು: ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಪ್ಪಿನಮೊಗರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸುಟ್ಟ ಗಾಯಗೊಂಡ ವ್ಯಕ್ತಿ ಕೊಪ್ಪರಿಗೆಗುತ್ತು ನಿವಾಸಿ ಸ್ವಾಮೀತ್ ಶೆಟ್ಟಿ (25) ಎಂಬವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಎಂಬಲ್ಲಿ ಸೋಮವಾರ ರಾತ್ರಿ ಸುಮಾರು 11:30 ಗಂಟೆಗೆ ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ ಸ್ವಾಮೀತ್ ಶೆಟ್ಟಿಯ ತಂದೆ ವಿಶ್ವನಾಥ ಶೆಟ್ಟಿರವರು ತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದಿದ್ದಾರೆ. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಚಿಲಕ ಹಾಕಿ ಪ್ಲಾಸ್ಟಿಕ್ ಕ್ಯಾನ್ ನಲ್ಲಿದ್ದ ಪೆಟ್ರೊಲ್ ನ್ನು ಮಗನ ಮೈ ಮೇಲೆ ಸುರಿದು ಅಲ್ಲಿಯೇ ಇದ್ದ ಸಿಗರ್ ಲೈಟರ್ ನಿಂದ ಬೆಂಕಿ ಹಚ್ಚಿದ್ದು, ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!