Monday, June 30, 2025
spot_imgspot_img
spot_imgspot_img

ದಕ್ಷಿಣ ಕನ್ನಡ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಜು 12, 13 ರಂದು ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಜುಲೈ 15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಾದ್ಯಂತ ಜುಲೈ 15ರವರೆಗೆ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಗಾಳಿ, ಗುಡುಗುಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 12 ಮತ್ತು 13 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ 45-55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಕಾರಣ ಈ ಸಂದರ್ಭ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಸಲಾಗಿದೆ. ಅಂತೆಯೇ ವಾಯುಭಾರ ಕುಸಿತದಿಂದ ಅರಬ್ಬೀ ಸಮುದ್ರ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ.

- Advertisement -

Related news

error: Content is protected !!