- Advertisement -
- Advertisement -
ಚೆನ್ನೈ: ನದಿಯಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ರಕ್ಷಿಸಲು ಹೋಗಿ ಐವರು ನೀರುಪಾಲಾಗಿರುವ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದಿದೆ.

ಮಹಿಳೆಯರು ನದಿಯಲ್ಲಿ ಬಟ್ಟೆ ಒಗೆಯಲು ಹೋದಾಗ ಮಕ್ಕಳು ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಾಲಕಿಯೊಬ್ಬಳು ನೀರಿನಲ್ಲಿ ಸಿಲುಕಿಕೊಂಡಾಗ ಆಕೆಯ ರಕ್ಷಣೆಗೆ ಹೋದ ಐವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸುಮತಿ (35), ಅಶ್ವಿತಾ (15), ಜೀವಿತಾ (14), ನರ್ಮಾ (12) ಮತ್ತು ಮುನಸ್ವಾಮಿ ಪತ್ನಿ ಜ್ಯೋತಿಲಕ್ಷ್ಮೀ (30) ಎಂದು ಗುರುತಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಸುಮಾರು 1 ಗಂಟೆಯ ಕಾಲ ಕಾರ್ಯಾಚರಣೆ ನಡೆಸಿ, ಐವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಪೊನ್ನೇರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.



- Advertisement -