- Advertisement -
- Advertisement -
ಮಂಗಳೂರು: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅನುಮೋದಿಸಿದ್ದಾರೆ.
ಈ ಕುರಿತು ಸೋಮವಾರ ಇಲಾಖೆಯು ತುಳು ಅಕಾಡೆಮಿಗೆ ಪತ್ರ ಬರೆದಿದೆ. ಈ ಬಗ್ಗೆ, ಭಾರತೀಯ ಭಾಷಾ ಸಂಸ್ಥಾನವೂ ತಜ್ಞ ಸಮಿತಿಯನ್ನು ರಚಿಸಿ ಯುನಿಕೋಡ್ಗೆ ಸೇರಿಸುವ ಬಗ್ಗೆ ಶಿಫಾರಸು ಮಾಡಿರುವುದು ಗಮನಾರ್ಹ. ಇದರಿಂದ ತುಳು ಲಿಪಿಯು ಯುನಿಕೋಡ್ನಲ್ಲಿ ಮೂಡುವ ಪುಕ್ರಿಯೆ ಸುಗಮವಾಗಿದೆ ಎಂದು ಮುಖ್ಯ ಕಚೇರಿ ಅಧಿಕಾರಿ ಬೇಳೂರು ಸುದರ್ಶನ ತಮ್ಮ ಫೇಸ್ಟುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಅಂತೆಯೇ ಸಚಿವ ಅರವಿಂದ್ ಲಿಂಬಾವಳಿ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು ಡಿಜಿಟಲ್ ವೇದಿಕೆಗಳಲ್ಲಿ ತುಳು ಲಿಪಿ ಹೆಚ್ಚು ಮೂಡಿ ಬರಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದಿದ್ದಾರೆ.
- Advertisement -