Saturday, June 28, 2025
spot_imgspot_img
spot_imgspot_img

ಮಗನ ಹೆಸರಿನಲ್ಲಿ ಚಿರತೆ ದತ್ತು ಪಡೆದ ರಿಷಬ್ ಶೆಟ್ಟಿ ದಂಪತಿ

- Advertisement -
- Advertisement -

ಬೆಂಗಳೂರು: ನಟ ದರ್ಶನ್ ಅವರು ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಮೃಗಾಲಯಗಳ ನೆರವಿಗೆ ನೀಡಿದ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಈಗಾಗಲೇ ಕನ್ನಡ ಚಿತ್ರರಂಗದ ನಟ-ನಟಿಯರು ಹಾಗೂ ದರ್ಶನ್ ಅಭಿಮಾನಿಗಳು ರಾಜ್ಯದ ವಿವಿಧ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಇದೀಗ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕೂಡ ಚಿರತೆಯೊಂದನ್ನು ದತ್ತು ಪಡೆದಿದ್ದಾರೆ.

ರಿಷಬ್‌ ಶೆಟ್ಟಿ ತಮ್ಮ ಪುತ್ರ ರಣ್ವಿತ್‌ ಶೆಟ್ಟಿ ಹೆಸರಿನಲ್ಲಿ ಒಂದು ವರ್ಷದ ಅವಧಿಗೆ ಇಂಡಿಯನ್‌ ಲೆಪರ್ಡ್‌(ಚಿರತೆ) ದತ್ತು ಪಡೆದಿದ್ದು, ‘ಮೈಸೂರು ಮೃಗಾಲಯದ ವತಿಯಿಂದ ರಣ್ವಿತ್‌ ಶೆಟ್ಟಿ, ರಿಷಬ್ ಶೆಟ್ಟಿಗೆ ಧನ್ಯವಾದ ತಿಳಿಸಿದೆ.

- Advertisement -

Related news

error: Content is protected !!