ವಿಟ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಇದರ ವತಿಯಿಂದ ಎ ಜೆ ಆಸ್ಪತ್ರೆ ರಕ್ತ ನಿಧಿ ಘಟಕ ಮಂಗಳೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ನಡೆಯಲಿದೆ.

ಈ ರಕ್ತದಾನ ಶಿಬಿರವು ಜುಲೈ 25 ಆದಿತ್ಯವಾರದಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 12.30 ರವರೆಗೆ ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲತ್ತಡ್ಕದಲ್ಲಿ ಹಮ್ಮಿಕೊಳ್ಳಲಾಗಿದೆ. ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳುವವರು 18 ವರ್ಷದಿಂದ ಮೇಲ್ಪಟ್ಟು 60 ವರ್ಷ ವಯೋಮಿತಿಯ ಹಾಗೂ 45 ಕೆ.ಜಿ ಗಿಂತ ಅಧಿಕ ದೇಹ ತೂಕ ಹೊಂದಿರುವ ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡಬಹುದು.

ಇದೇ ಸಂದರ್ಭದಲ್ಲಿ ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ಮುಖ್ಯ ಶಿಕ್ಷಕ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ಕುಂಞಿ ನಾಯ್ಕ ಪೆರುವಾಯಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 18 ವರ್ಷಗಳಿಂದ ಶುಶ್ರೂಶಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಚಂದ್ರಪ್ರಭಾ ಇವರುಗಳಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಕ್ತದಾನ ಶಿಬಿರದಲ್ಲಿ ಭಾಗವಹಿಸುವವರು ಈ ನೋಂದಣಿ ಸಂಖ್ಯೆ ಸಂಪರ್ಕಿಸಬಹುದು: ಯತೀಶ್ ಪೆರುವಾಯಿ: 9663691550, ಮೋಕ್ಷಿತ್ ಪೆರುವಾಯಿ: 8277406151, ಶೇಖರ ಪೂಜಾರಿ:9481686225, ಮಂಜುನಾಥ ಆಚಾರ್ಯ: 944999130.

