Wednesday, May 1, 2024
spot_imgspot_img
spot_imgspot_img

ಖಾಸಗಿ ಬ್ಯಾಂಕ್‌ನ ಗನ್ ಮ್ಯಾನ್ ಹಾಗೂ ಬೆಳ್ತಂಗಡಿ ಮೂಲದ ವಾಹನ ಚಾಲಕ ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -

ಕೇರಳದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮಂಗಳೂರಿನ ಖಾಸಗಿ ಬ್ಯಾಂಕ್ ನ ವಾಹನದ ಚಾಲಕ ಮತ್ತು ಬೆಂಗಾವಲು ಸಿಬ್ಬಂದಿ (ಗನ್ ಮ್ಯಾನ್) ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಕಣ್ಣೂರು ಜಿಲ್ಲೆಯ ಪೆರಿಯಾರು ಸಮೀಪ ಅಪಘಾತ ನಡೆದಿದೆ. ಕಾರಿನಲ್ಲಿ ಸಾಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಗೂಡ್ಸ್ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೊಲೆರೊ ವಾಹನದಲ್ಲಿದ್ದ ಚಾಲಕ ಜಯಪ್ರಕಾಶ್ ಕುಲಾಲ್ ಹಾಗೂ ಗನ್ ಮ್ಯಾನ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತದ ಎಲ್ಲಾ ದೃಶ್ಯ ಸ್ಥಳೀಯ ಅಂಗಡಿಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಐ.ಸಿ.ಐ.ಸಿ.ಐ ಬ್ಯಾಂಕಿನ ವಾಹನ ಚಾಲಕರಾಗಿದ್ದ ಜಯಪ್ರಕಾಶ್ ಕೇರಳ ರಾಜ್ಯದ ಎಟಿಎಂಗಳಿಗೆ ಹಣವನ್ನು ತುಂಬಿಸುವ ಸಲುವಾಗಿ ಸಂಸ್ಥೆಯ ಮಹೀಂದ್ರ ಕಂಪನಿಯ ಬೊಲೆರೊ ವಾಹನವನ್ನು ಚಲಾಯಿಸುತ್ತಿದ್ದರು ಎನ್ನಲಾಗಿದೆ.

ಮೂಲತಃ ಕಡಬ ತಾಲೂಕಿನ ಅಲಂಗಾರು ಗ್ರಾಮ ನಿವಾಸಿಯಾಗಿರುವ ಜಯಪ್ರಕಾಶ್ ಕುಲಾಲ್ ರವರು ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಕೆ.ಬಿ.ರಸ್ತೆ ಪಕ್ಕದಲ್ಲಿ ಖರೀದಿಸಿದ ಮನೆಯಲ್ಲಿ ವಾಸ್ತವ್ಯವಿದ್ದರು. ಮೃತ ಜಯಪ್ರಕಾಶ್ ಕುಲಾಲ್, ಪತ್ನಿ ಕಳಿಯ ಗ್ರಾಮದ ಆಶಾ ಕಾರ್ಯಕರ್ತೆ ಪ್ರತಿಭಾ, ಓರ್ವ ಪುತ್ರ, ಓರ್ವ ಪುತ್ರಿ, ತಂದೆ, ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

- Advertisement -

Related news

error: Content is protected !!