- Advertisement -
- Advertisement -

ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ ನೀಡಿ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನಾನ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದ 757 ಪ್ರಾರ್ಥನ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಇಂದು ಅಧಿಕೃತ ಆದೇಶ ಹೊರಡಿಸಿದೆ.



- Advertisement -








