Sunday, June 28, 2026
spot_imgspot_img
spot_imgspot_img

ಒಂದೇ ಕುಟುಂಬದ ಆರು ಮಂದಿಯ ನಿಗೂಢ ಸಾವು!

- Advertisement -
- Advertisement -

ಗುಂಟೂರು: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ತಾಲೂಕಿನ ಲಂಕವಾನಿದಿಬ್ಬ ಗ್ರಾಮದಲ್ಲಿ ಸಂಭವಿಸಿದೆ.

ಇದನ್ನೂ ಓದಿ: ಬಂಟ್ವಾಳ: ರೈಲ್ವೇ ಹಳಿ ಮೇಲೆ ಯುವಕ ಶವ ಪತ್ತೆ ಪ್ರಕರಣ; ಸೂಕ್ತ ತನಿಖೆ ನಡೆಸುವಂತೆ ಹಿಂದು ಜಾಗರಣ ವೇದಿಕೆಯಿಂದ ಮನವಿ

ಮೃತಪಟ್ಟ ವ್ಯಕ್ತಿಗಳನ್ನು ರಾಮಮೂರ್ತಿ, ಕಿರಣ್​, ಮನೋಜ್​, ವಂಡಬೋ, ಮಹೇಂದ್ರ, ಒಡಿಶಾ ನಿವಾಸಿ ನವೀನ್​ ಎನ್ನಲಾಗಿದೆ.

ಮನೆಯಲ್ಲಿ ರಾತ್ರಿ ವೇಳೆ ಎಲ್ಲರೂ ಮಲಗಿದ್ದ ವೇಳೆ ಕರೆಂಟ್ ತಂತಿ ಶೆಡ್​ ಮೇಲೆ ಬಿದ್ದು ಈ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಆದರೆ ಶಾರ್ಟ್​ ಸರ್ಕ್ಯೂಟ್​ ಆದ ಬಗ್ಗೆ ಯಾವುದೇ ಕುರುಹು ಇಲ್ಲದಿರುವುದರಿಂದ ಇದು ಕರೆಂಟ್​ ತಂತಿ ಬಿದ್ದಿರುವ ಕಾರಣದಿಂದಲ್ಲ ಎಂದು ವಿದ್ಯುತ್​ ಸರಬರಾಜು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ತಂಗಿಯ ಆಭರಣಗಳನ್ನು ಕಳವು ಮಾಡಿ ಪ್ರಿಯಕರನೊಂದಿಗೆ ಪರಾರಿಯಾದ ವಿವಾಹಿತೆ ಅಕ್ಕ!

ಶೆಡ್ ನಲ್ಲಿರುವ ರಸಾಯನಿಕದಿಂದ ಮನೆ ಮೇಲೆ ಬೆಂಕಿ ತಗುಲಿ ಈ ಘಟನೆ ನಡೆದಿರಬಹುದು ಎಂದು ವಿದ್ಯುತ್ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಸಾವಿಗೆ ನಿಖರ ಕಾರಣ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

driving
- Advertisement -

Related news

error: Content is protected !!